Row over ‘untouchable’ Indian dog

21/09/2011

BBC South Asia

24 September 2010 Last updated at 19:26 GMT

Row over ‘untouchable’ Indian dog

Police in India are investigating claims that a Dalit woman has been ordered to pay compensation to the high-caste owners of a dog she fed.

Sunita Jatav with Sheru

Sunita Jatav fed Sheru some leftover bread

The woman says the village council wants her to pay a fine of 15,000 rupees ($330) for feeding the dog, which the owners have now kicked out. They are reported to have said the dog is “untouchable”, but deny being motivated by caste considerations. Although widespread, discrimination against Dalits is an offence in India. Dalits, who make up nearly 20% of the Indian population, say little has changed despite the government enacting various laws banning caste-based discrimination. ‘He got very angry’ The incident took place in Malikpur village in Morena district in central Madhya Pradesh state. “I made some roti [Indian bread] and took it to my husband who works in a farm. After I had fed him, we had some leftovers which I gave to the dog,” the Dalit woman, Sunita Jatav, said. She said the owner of the dog, Amrutlal Kirari, saw her feeding him. “He got very angry and said ‘You’ve fed my dog, it has become an untouchable now’.” Mrs Jatav said Mr Kirari left the dog, a black mongrel called Sheru, tied to a pole outside her house. On Monday, the village council met and decided that Sheru had been defiled and hence Mr Kirari should be paid 15,000 rupees as compensation, Mrs Jatav alleged.

On Tuesday, she approached the district collector of Morena who ordered an inquiry into the incident. Senior police officer in the area, Baldev Singh, told the BBC that he was investigating the matter. He said Mr Kirari had alleged that after eating the bread, Sheru fell ill. Mr Kirari said he abandoned the dog at Mrs Jatav’s house so she could look after it and nurse it back to health, Mr Singh added. Dalits – formerly untouchables – are considered at the bottom of the Hindu caste system. Any discrimination against them is an offence and punishable by law.

Courtesy: http://www.bbc.co.uk/news/world-south-asia-11403486

 


ಜಾತೀಯತೆಗೆ ಬುದ್ಧ ಪರಿಹಾರ: ದೇವದಾಸ್:ರಾಜ್ಯ ಮಟ್ಟದ ಬೌದ್ಧ ಸಮಾವೇಶ

13/06/2011

ಹಾಸನ, ಜೂ.12: ಗೌತಮ ಬುದ್ಧನ ತ್ಯಾಗ ಮತ್ತು ಅವನ ಪಂಚಶೀಲ ತತ್ತ್ವಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳುವ ಅಗತ್ಯ ಇದೆ ಎಂದು ದಲಿತ ಸಂಘರ್ಷ ಸಮತಿಯ ರಾಜ್ಯ ಸಂಘಟನಾ ಸಂಚಾಲಕ ಎಂ.ದೇವದಾಸ್ ಹೇಳಿದ್ದಾರೆ. ಹಾಸನದ ಅಂಬೇಡ್ಕರ್ ಭವನದಲ್ಲಿ ನಡೆದ ಪ್ರಬುದ್ಧ ಭಾರತ ನಿರ್ಮಾಣಕ್ಕಾಗಿ 2550ನೆ ಬುದ್ಧ ಜಯಂತಿಯ ಅಂಗವಾಗಿ ರಾಜ್ಯ ಮಟ್ಟದ ಬೌದ್ಧ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಬುದ್ಧನ ತತ್ತ್ವಗಳನ್ನು ಪ್ರತಿಯೊಬ್ಬರು ಪರಿಪಾಲನೆ ಮಾಡುವುದರಿಂದ ದೇಶದಲ್ಲಿ ಶಾಂತಿ ನೆಲಸಲು ಸಾಧ್ಯ ಎಂದು ಅಭಿಪ್ರಾಯಿಸಿದರು.

ಹಾಸನದ ಅಂಬೇಡ್ಕರ್ ಭವನದಲ್ಲಿ ರವಿವಾರ ನಡೆದ ಪ್ರಬುದ್ಧ ಭಾರತ ನಿರ್ಮಾಣಕ್ಕಾಗಿ 2550ನೆ ಬುದ್ಧ ಜಯಂತಿಯ ಅಂಗವಾಗಿ ರಾಜ್ಯ ಮಟ್ಟದ ಬೌದ್ಧ ಸಮಾವೇಶ ಉದ್ಘಾಟಿಸುತ್ತಿರುವ ಗಣ್ಯರು.

ಹಾಸನದ ಅಂಬೇಡ್ಕರ್ ಭವನದಲ್ಲಿ ರವಿವಾರ ನಡೆದ ಪ್ರಬುದ್ಧ ಭಾರತ ನಿರ್ಮಾಣಕ್ಕಾಗಿ 2550ನೆ ಬುದ್ಧ ಜಯಂತಿಯ ಅಂಗವಾಗಿ ರಾಜ್ಯ ಮಟ್ಟದ ಬೌದ್ಧ ಸಮಾವೇಶ ಉದ್ಘಾಟಿಸುತ್ತಿರುವ ಗಣ್ಯರು. ಇಂದಿನ ಜಾತೀಯತೆ, ಅಸ್ಪಶತೆ ಸೇರಿದಂತೆ ಸಾಮಾಜಿಕ ಪಿಡುಗುಗಳಿಗೆ ಬುದ್ಧ ಪರಿಹಾರ ಎಂದು ದೇವದಾಸ್ ನುಡಿದರು.ದೇಶದಲ್ಲಿ ತಾಂಡವಾಡುತ್ತಿರುವ ಭ್ರಷ್ಟಾಚಾರದ ವಿರುದ್ಧ ಬೀಗಿಳಿದು ಹೋರಾಟ ನಡೆಸಬೇಕಾದ ಅನಿವಾರ್ಯ ಸೃಷ್ಟಿಯಾಗಿದೆ. ಬುದ್ಧನ ಆದರ್ಶಗಳನ್ನು ಎಲ್ಲರೂ ಪಾಲಿಸಿದ್ದರೆ ಇಂದು ಅಣ್ಣಾ ಹಝಾರೆ ಮತ್ತು ಬಾಬಾ ರಾಮ್‌ದೇವ್ ಹೋರಾಟ ಆರಂಭಿಸುವ ಅಗತ್ಯ ಉದ್ಬವಿಸುತ್ತಿರಲಿಲ್ಲ ಎಂದವರು ಹೇಳಿದರು. ಮನುಷ್ಯನಿಗೆ ಎಷ್ಟೇ ಆಸ್ತಿ-ಪಾಸ್ತಿ ಇದ್ದರೂ ನೆಮ್ಮದಿ ಅತಿಮುಖ್ಯ. ಬುದ್ಧನ ತತ್ತ್ವಾದರ್ಶ ಪಾಲಿಸುವುದರಿಂದ ಶಾಂತಿ ಮತ್ತು ನೆಮ್ಮದಿ ಕಂಡುಕೊಳ್ಳಲು ಸಾಧ್ಯ ಎಂದು ದೇವದಾಸ್ ತಿಳಿಸಿದರು. ಬೌದ್ಧ ಗುರು ಬೋದಿದತ್ತ ಬಂತೇಜಿ ಮಾತನಾಡಿ, ಗೌತಮ ಬುದ್ಧನ ತತ್ತ್ವಾದರ್ಶಗಳು ಸರಳ ಮತ್ತು ಸುಸಂಸ್ಕೃತವಾಗಿವೆ. ಹಾಗಾಗಿಯೇ ಸಂವಿಧಾನಶಿಲ್ಪಿ ಡಾ.ಅಂಬೇಡ್ಕರ್‌ರು ದಲಿತ ತತ್ತ್ವದಿಂದ ಬುದ್ಧತ್ವದೆಡೆಗೆ ನಡೆಯಬೇಕೆಂಬ ಆಶಯ ಹೊಂದಿದ್ದರು ಎಂದರು. ಸಮಾವೇಶದಲ್ಲಿ ಸಾವಿರಾರು ಮಂದಿ ಬೌದ್ಧ ಅನುಯಾಯಿಗಳು, ದಲಿತ ಕಾರ್ಯಕರ್ತರು ಭಾಗವಹಿಸಿದ್ದರು.

http://vbnewsonline.com/MainNews/57321/

ಭೈರಪ್ಪರಿಂದ ಹಿಂದೂ ಧರ್ಮದ ವೌಢ್ಯಗಳಿಗೆ ಬೆಂಬಲ: ಸಿಎನ್ನಾರ್

24/01/2011
ಸೋಮವಾರ – ಜನವರಿ -24-2011

ಬೆಂಗಳೂರು, ಜ. 23: ಎಸ್.ಎಲ್.ಭೈರಪ್ಪನವರು ಬಹುತೇಕ ತಮ್ಮ ಎಲ್ಲ ಕಾದಂಬರಿಗಳಲ್ಲಿಯೂ ಹಿಂದೂ ಧರ್ಮದ ಅರ್ಥವಿಲ್ಲದ ವೌಢ್ಯ ಆಚರಣೆ ಗಳನ್ನು ಬೆಂಬಲಿಸುತ್ತಾರೆ ಎಂದು ಪ್ರೊ.ಸಿ.ಎನ್. ರಾಮಚಂದ್ರನ್ ವಿಷಾದಿಸಿದ್ದಾರೆ.

ನಗರದ ಕನ್ನಡ ಸಾಹಿತ್ಯ ಪರಿಷತ್‌ನ ಸಭಾಂಗಣದಲ್ಲಿಂದು ನವಕರ್ನಾಟಕ ಪ್ರಕಾಶನದ ವತಿಯಿಂದ ಹಮ್ಮಿಕೊಳ್ಳ ಲಾಗಿದ್ದ ಡಾ.ಕೆ.ಎಲ್.ಗೋಪಾಲ ಕೃಷ್ಣಯ್ಯ ಅವರ ‘ಡಾ.ಎಸ್.ಎಲ್.ಭೈರಪ್ಪನವರ ಕಾದಂಬರಿಗಳೊಡನೆ ಧರ್ಮ-ಕರ್ಮ ಜಿಜ್ಞಾಸೆ’ ಕೃತಿಯನ್ನು ಅನಾವರಣ ಗೊಳಿಸಿ ಅವರು ಮಾತನಾಡಿದರು.
ಭೈರಪ್ಪನವರು ತಮ್ಮ ಗ್ರಹಭಂಗ ಕಾದಂಬರಿಯಲ್ಲಿ ಹಿಂದೂ ಧರ್ಮಕ್ಕೆ ವಿರುದ್ಧವಾಗಿ ಮರುಮುದುವೆಯಾಗುವ ಕ್ಯಾತಾಯಿನಿಗೆ ಮೂರು ಸಲ ಅಕಾರಣ ವಾಗಿ ಗರ್ಭಪಾತ ಮಾಡಿಸಿ ಸಾಯಿಸಿದ್ದಾರೆ.

‘ದಾಟು’ವಿನಲ್ಲಿ ಜಾತೀಯತೆ ಯನ್ನು ವಿರೋಧಿಸುವ ದಲಿತ ಸಮುದಾಯದ ಮೋಹನ್‌ದಾಸ್‌ನು ಗರ್ಭಗುಡಿಯನ್ನು ಪ್ರವೇಶಿಸುವಾಗ ಮೂರ್ಚೆ ಹೋಗುತ್ತಾನೆ. ಹಿಂದೂ ಧರ್ಮದ ನಂಬಿಕೆಗಳ ವಿರುದ್ಧವಾಗಿ ಈಜುವ ಪ್ರತಿಯೊಂದು ಪಾತ್ರಗಳು ಅವಸಾನ ಹೊಂದುವಂತೆ ಚಿತ್ರಿಸಿದ್ದಾರೆ ಎಂದು ಅವರು ಆರೋಪಿಸಿದರು.

ಕವಲು ಕಾದಂಬರಿಯಲ್ಲಿ ಕೂಡ ಬೈರಪ್ಪನವರು ಸ್ತ್ರೀಪಾತ್ರಗಳೆಲ್ಲವೂ ಹಣದಾಸೆಗಾಗಿ ಯಾರಿಗಾದರೂ ತಮ್ಮ ಮೈ ಮಾರಿಕೊಳ್ಳುವಂತೆ ಹಾಗೂ ತಮ್ಮ ಗಂಡಂದಿರನ್ನು ವಿನಾಕಾರಣ ಕಾನೂನಿನ ಇಕ್ಕಟ್ಟಿಗೆ ಸಿಲುಕಿಸುವ ಖಳ ಪಾತ್ರಗಳಂತೆ ಚಿತ್ರಿಸಿದ್ದಾರೆ.

ಅವರು ನಮ್ಮ ದೇಶದ ಕಾನೂನುಗಳನ್ನು ಇನ್ನೊಮ್ಮೆ ಅಧ್ಯಯನ ಮಾಡುವುದು ಒಳ್ಳೆಯದು ಎಂದು ಅವರು ಅಭಿಪ್ರಾಯಪಟ್ಟರು.

ಯಾವುದೆ ಧರ್ಮ ಎಲ್ಲ ಕಾಲ ಘಟ್ಟದಲ್ಲಿ ಒಂದೆ ರೀತಿ ಇರಲು ಸಾಧ್ಯ ವಿಲ್ಲ. ಆಯಾ ಕಾಲದ ವಿವಿಧ ವರ್ಗಗಳು, ಸಾಮಾಜಿಕ ಸ್ಥಿತಿಗತಿಯನ್ನು ಆಧರಿಸಿ ಧರ್ಮ ಸ್ಥಿತ್ಯಂತರಗೊಳ್ಳುತ್ತಲೆ ಇರುತ್ತದೆ. ವೈದಿಕ ಧರ್ಮವು ಸಾಂಸ್ಕೃತಿಕ ಹಿಂದೂ ಧರ್ಮಕ್ಕಿಂತಲೂ ಪುರಾತನ ವಾದ ಇತಿಹಾಸವನ್ನು ಹೊಂದಿದೆ. ಹಿಂದೂ ಎಂಬ ಶಬ್ದದ ಕೂಡ ಪರಕೀಯ ರಿಂದ ಬಂದುದಾಗಿದೆ ಎಂದರು.
ಬುದ್ಧ ವೈದಿಕ ಪುರೋಹಿತಶಾಹಿ ಧರ್ಮವನ್ನು ವಿರೋಧಿಸಿದರೆ ಹೊರತು ಹಿಂದೂ ಧರ್ಮವನ್ನಲ್ಲ. ಕಾಲಕಾಲಕ್ಕೆ ಬದಲಾಗುವ ಧರ್ಮ ನಮ್ಮನ್ನು ರಕ್ಷಿಸು ತ್ತದೆ ಎಂಬುದನ್ನು ನಂಬುವುದಾದರೂ ಹೇಗೆ ಎಂದು ಅವರು ಪ್ರಶ್ನಿಸಿದರು. ನೂರಾರು ವರ್ಷಗಳ ಹಿಂದೆ ಮುಸ್ಲಿಂ ಮಹಾರಾಜರು 2 ಸಾವಿರ ದೇವಾ ಲಯಗಳನ್ನು ನಾಶಗೊಳಿಸಿದರು.

ಅವರ ವಾರಸುದಾರರಾದ ಇಂದಿನ ಮುಸ್ಲಿಂರು ಈ ದುಷ್ಕೃತ್ಯಕ್ಕೆ ಬಲಿಯಾಗಬೇಕೆಂಬುದು ಭೈರಪ್ಪನವರ ಆವರಣ ಕಾದಂಬರಿಯ ವಾದವಾಗಿದೆ.

ಆದರೆ ಫರ್ಗುಶನ್ ಎಂಬ ವಿದೇಶಿ ವಿದ್ವಾಂಸ ಶೇ.99ರಷ್ಟು ಹಿಂದೂ ಧರ್ಮದ ಅನುಯಾಯಿಯಾಗಿದ್ದು ಕೊಂಡು ಹಿಂದೂ ಧರ್ಮದ ಕುರಿತು ಸಾಕಷ್ಟು ಗ್ರಂಥಗಳನ್ನು ರಚಿಸಿದ್ದಾರೆ. ಆದರೆ ಅವರು ಹಿಂದೂ ಧರ್ಮದ ವಾರಸುದಾರರಲ್ಲ ಎನ್ನುವುದನ್ನು ಭೈರಪ್ಪನವರು ಗಮನಿಸಬೇಕು ಎಂದು ಅವರು ಹೇಳಿದರು

Courtesy : Varthabharathi

http://vbnewsonline.com/Benguluru/41448/